ಕುಶಾಲನಗರ, ಸೆ 20: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿನ ಆರೆಂಜ್ ಫ್ಯಾಮಿಲಿ ಬ್ಯೂಟ ಪಾಲರ್ & ಸ್ವಾ ಎಂಬ ಹೆಸರಿನಲ್ಲಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಮಾಹಿತಿ ಸಂಗ್ರಹಿಸಿ ದಿನಾಂಕ: 18-09-2025 ರಂದು ದಾಳಿ ನಡೆಸಿ 04 ಮಹಿಳೆಯರನ್ನು ರಕ್ಷಣೆ ಮಾಡಿ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಸೇರಿಸಲಾಗಿರುತ್ತದೆ ಹಾಗೂ ವೇಶ್ಯಾವಾಟಿಕೆ ನಡೆಸುತ್ತಿದ್ದ ಈ ಕೆಳಕಂಡ 04 ಜನ ಆರೋಪಿಗಳ ಮೇಲೆ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 3, 4, 5(2), 7 Immortal Traffic (Prevention) Act ಆಡಿಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ.
ಸದರಿ ಪ್ರಕರಣದ ಆರೋಪಿಗಳನ್ನು ಡಿಎಸ್ಪಿ ಮಹೇಶ್ ಕುಮಾರ್, ಅನೂಪ್ ಮಾದಪ್ಪ ಪಿ, ಸಿಪಿಐ, ವಿರಾಜಪೇಟೆ ವೃತ್ತ, ಪ್ರಮೋದ್, ಪಿಎಸ್ಐ ವಿರಾಜಪೇಟೆ ನಗರ ಪೊಲೀಸ್ ಠಾಣೆ, ಲತಾ.ಎನ್.ಜೆ. ಪಿಎಸ್.ಐ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ವಿಶೇಷ ತನಿಖಾ ತಂಡ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ 18-09-2025 ರಂದು ಈ ಕೆಳಕಂಡ 04 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.
ಆರೋಪಿಗಳ ವಿವರ:
1. ಪ್ರದೀಪನ್.ಪಿ.ಪಿ. 48 ವರ್ಷ, ಕಣ್ಣೂರು ಜಿಲ್ಲೆ, ಕೇರಳ ರಾಜ್ಯ,
2. ಕಲೇಶ್ ಕುಮಾರ್, 45 ವರ್ಷ, ಕಣ್ಣೂರು ಜಿಲ್ಲೆ, ಕೇರಳ ರಾಜ್ಯ
3. ಶಾಜಿ, 38 ವರ್ಷ, ಕಣ್ಣೂರು ಜಿಲ್ಲೆ ಕೇರಳ ರಾಜ್ಯ
4. ನೆಲ್ಲಮಕ್ಕಡ.ಎ. ಪೊನ್ನಣ್ಣ, 48 ವರ್ಷ, ಅಮ್ಮತ್ತಿ ಗ್ರಾಮ, ವಿರಾಜಪೇಟೆ ತಾ।
ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಕೆ.ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ಮತ್ತು ದಿನೇಶ್ ಕುಮಾರ್.ಬಿ.ಪಿ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ರವರು ಶ್ಲಾಘಿರಿಸಿರುತ್ತಾರೆ.
ವಿಶೇಷ ಸೂಚನೆ:- ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಯಾವುದೆ? ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಹಾಗೂ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ.
Back to top button
error: Content is protected !!