ಕಾರ್ಯಕ್ರಮ
ಗುಡ್ಡೆಹೊಸೂರಿನಲ್ಲಿ ಶಾಸಕರಿಂದ ಅರಣ್ಯ ಹಕ್ಕು ಪತ್ರ ವಿತರಣೆ

ಕುಶಾಲನಗರ, ಫೆ 10:
ಸರ್ಕಾರಿ ಕೆಲಸ ಕಾರ್ಯಗಳ ಸಂದರ್ಭ ಮಧ್ಯವರ್ತಿಗಳ ಮೊರೆ ಹೋಗದೆ ನೇರವಾಗಿ ಅಧಿಕಾರಿಗಳನ್ನು ಜನಪ್ರತಿನಿಧಿಗಳನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವಂತಾಗಬೇಕೆಂದು ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಹೇಳಿದರು.
ಅವರು ಗುಡ್ಡೆ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರಣ್ಯ ಹಕ್ಕು ಪತ್ರ ವಿತರಣೆ ಮಾಡಿದ ನಂತರ ಮಾತನಾಡಿದರು.
ಗ್ರಾಮದ ಮತ್ತು ಸುತ್ತಮುತ್ತಲ ವ್ಯಾಪ್ತಿಯ ಹಳ್ಳಿಗಳ ಜನರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸದ್ಯದಲ್ಲಿಯೇ ಜನ ಸಂಪರ್ಕ ಸಭೆ ಏರ್ಪಡಿಸಲಾಗುವುದು ಎಂದು ಹೇಳಿದ ಶಾಸಕ ಮಂತರ್ ಗೌಡ ಪ್ರತಿಯೊಬ್ಬರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡುಹಿಡಿಯಲಾಗುವುದು ಎಂದರು.
ಅರಣ್ಯ ಕಂದಾಯ ಗ್ರಾಮ ಪಂಚಾಯಿತಿ ಜಂಟಿ ಸಭೆ ಸೇರಿ ಸಮಸ್ಯೆಗೆ ಸ್ಥಳದಲ್ಲಿಯೇ ಪರಿಹಾರ ಹುಡುಕುವ ಚಿಂತನೆ ಹರಿಸಲಾಗಿದೆ ಎಂದರು.
ಗ್ರಾಮದ ಸುಮಾರು 126 ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲಾಯಿತು ಉಳಿದಂತೆ ಇರುವ 30 ಫಲಾನುಭವಿಗಳಿಗೆ ಅರ್ಜಿಗಳ ಪುನರ್ ಪರಿಶೀಲನೆ ಮಾಡಿ ವಿತರಿಸಲಾಗುವುದು ಎಂದು ಶಾಸಕರು ಹೇಳಿದರು.
ಕಾರ್ಯಕ್ರಮದಲ್ಲಿ ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರುಕ್ಮಿಣಿ ಉಪಾಧ್ಯಕ್ಷರಾದ ಮಾದಪ್ಪ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಂ ಆರ್ ಸುಮೇಶ್ ಕಾರ್ಯದರ್ಶಿ ಕುಮಾರಸ್ವಾಮಿ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರಾದ ಅನಿತಾ ಜಾನಪ್ಪ, ಉಪ ತಹಸಿಲ್ದಾರ್ ಮಧುಸೂದನ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದೇಗೌಡ, ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್, ಉಪ ವಲಯ ಅರಣ್ಯ ಅಧಿಕಾರಿ ಅನಿಲ್ ಡಿಸೋಜಾ ಸೇರಿದಂತೆ ಕಾಂಗ್ರೆಸ್ ಮುಖಂಡರು ಗ್ರಾಮ ಪಂಚಾಯಿತಿ ಸದಸ್ಯರುಗಳು, ಫಲಾನುಭವಿಗಳು ಇದ್ದರು.